July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya
error: Content is protected !!