23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ ನಡೆಯಿತು.

ಡಬ್ಲ್ಯೂಸಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರಭಟ್ ಸ್ವಾಗತಿಸಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಸಂಸ್ಥೆಯ ಮುಖಾಂತರ ಉಚಿತವಾಗಿ ಹತ್ತುಫಲಾನುಭವಿಗಳಿಗೆ ವಾಹನ ಚಾಲನ ತರಬೇತಿ ಕೊಡಿಸಿ ವಾಹನ ಚಾಲನ ಪರವಾನಿಗೆ ವಿತರಿಸಲಾಯಿತು. ಆಯ್ದ ಫಲನುಭವಿಗಳಿಗೆ ಎರಡು ಸಾವಿರ ಅಡಿಕೆ ಗಿಡ ತೆಂಗಿನ ಗಿಡ ನೂರು ಐನೂರು ಕೊಕೊ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅಡಿಕೆಬೆಳೆಗಳಿಗೆ ತಗಲುವ ರೋಗಗಳ ಮತ್ತು ಅದರ ನಿಯಂತ್ರಿಸುವ ಮಾಹಿತಿ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆಲ್ಲ ಪ್ರಗತಿಪರ ಕೃಷಿಕರಾದ ಶೈಲೇಂದ್ರ ಮರಾಠೆ ಈದು ಮಾಹಿತಿ ನೀಡಿದರು.

ವೇಣೂರಿನ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ ವಾಹನ ಚಾಲನ ಬಗ್ಗೆಲ್ಲ ವಿವರಿಸಿದರು. ಪ್ರಮಿಳಾ ಆರ್ ಭಟ್ ಧನ್ಯವಾದವಿತ್ತರು. ಸುಮಾರು ಎಂಬತ್ತು ರೈತರು ಭಾಗವಹಿಸಿದ್ದರು.,

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya
error: Content is protected !!