September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ ನಡೆಯಿತು.

ಡಬ್ಲ್ಯೂಸಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರಭಟ್ ಸ್ವಾಗತಿಸಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಸಂಸ್ಥೆಯ ಮುಖಾಂತರ ಉಚಿತವಾಗಿ ಹತ್ತುಫಲಾನುಭವಿಗಳಿಗೆ ವಾಹನ ಚಾಲನ ತರಬೇತಿ ಕೊಡಿಸಿ ವಾಹನ ಚಾಲನ ಪರವಾನಿಗೆ ವಿತರಿಸಲಾಯಿತು. ಆಯ್ದ ಫಲನುಭವಿಗಳಿಗೆ ಎರಡು ಸಾವಿರ ಅಡಿಕೆ ಗಿಡ ತೆಂಗಿನ ಗಿಡ ನೂರು ಐನೂರು ಕೊಕೊ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅಡಿಕೆಬೆಳೆಗಳಿಗೆ ತಗಲುವ ರೋಗಗಳ ಮತ್ತು ಅದರ ನಿಯಂತ್ರಿಸುವ ಮಾಹಿತಿ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆಲ್ಲ ಪ್ರಗತಿಪರ ಕೃಷಿಕರಾದ ಶೈಲೇಂದ್ರ ಮರಾಠೆ ಈದು ಮಾಹಿತಿ ನೀಡಿದರು.

ವೇಣೂರಿನ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ ವಾಹನ ಚಾಲನ ಬಗ್ಗೆಲ್ಲ ವಿವರಿಸಿದರು. ಪ್ರಮಿಳಾ ಆರ್ ಭಟ್ ಧನ್ಯವಾದವಿತ್ತರು. ಸುಮಾರು ಎಂಬತ್ತು ರೈತರು ಭಾಗವಹಿಸಿದ್ದರು.,

Related posts

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಕಳಿಯ: ಸಂಬೋಳ್ಯ-ಓಡ್ರೊಟ್ಟು ಪ.ಪಂಗಡ ರಸ್ತೆ ಕಾಂಕ್ರೀಟಿಕರಣಕ್ಕೆ ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನ ಮಂಜೂರು: ಮಾಜಿ ಪಂ.ಸದಸ್ಯರಿಂದ ರಸ್ತೆ ಪರಿಶೀಲನೆ

Suddi Udaya
error: Content is protected !!