30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಿ.8 ರಂದು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಮಿಪ್ರಾ ದಂತವೈದ್ಯರು, ಡಾ. ಮಹಮ್ಮದ್ ಶಾಹೀಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಯೆನೆಪೋಯ ಸಂಸ್ಥೆಯ ಸಮಾಜ ಸೇವಕಿ ಶ್ರೀಮತಿ ಸ್ವೀಕೃತರವರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ.ಪೌಲೋಸ್ ರವರು, ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಶಿವಾನಂದಸ್ವಾಮಿಯವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!