23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಿ.8 ರಂದು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಮಿಪ್ರಾ ದಂತವೈದ್ಯರು, ಡಾ. ಮಹಮ್ಮದ್ ಶಾಹೀಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಯೆನೆಪೋಯ ಸಂಸ್ಥೆಯ ಸಮಾಜ ಸೇವಕಿ ಶ್ರೀಮತಿ ಸ್ವೀಕೃತರವರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ.ಪೌಲೋಸ್ ರವರು, ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಶಿವಾನಂದಸ್ವಾಮಿಯವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ಯವರು ಕಾರ್ಯಕ್ರಮ ನಿರೂಪಿಸಿದರು.

Related posts

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya
error: Content is protected !!