22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.10 ಹಾಗೂ 11 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಲಿದೆ.

ಡಿ.10 ರಂದು ಮಧ್ಯಾಹ್ನ 2.30 ಘಂಟೆಗೆ ವಾರ್ಷಿಕೋತ್ಸವ ಪುರಸ್ಕಾರ ಸಮಾರಂಭ ನಡೆಯಲಿದೆ.
ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಧರ್ಮದರ್ಶಿ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎ. ಕುಮಾರ ಹೆಗ್ಡೆ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.11 ರಂದು ಬೆಳಗ್ಗೆ 11 ಘಂಟೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅವರ ಅಧ್ಯಕ್ಷತೆಯಲ್ಲಿ ‘ ಆರೋಹಣಮ್ ‘ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ಅಂದು ಚಲನಚಿತ್ರ ಹಾಗೂ ಧಾರಾವಾಹಿಯ ಖ್ಯಾತ ನಟಿ ಅನ್ವಿತಾ ಸಾಗರ್ ಅಭ್ಯಾಗತರಾಗಿ ಆಗಮಿಸಲಿದ್ದಾರೆ.

ಎರಡು ದಿನಗಳಲ್ಲಿಯೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!