ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

ಬೆಳ್ತಂಗಡಿ:ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜೆಸಿ ಸಪ್ತಾಹ ಕಾರ್ಯಕ್ರಮವು ಡಿ.14 ರಿಂದ 20 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆಯಲಿದೆ ಎಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಹೇಳಿದರು.

ಅವರು ಡಿ.9 ರಂದು ಬೆಳ್ತಂಗಡಿ ಜೆಸಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ 46 ವರ್ಷಗಳಿಂದ ಹಲವಾರು ಅಧ್ಯಕ್ಷರುಗಳು ಜೆಸಿ ಸಂಸ್ಥೆಯನ್ನು ಮುನ್ನಡೆಸಿ ಅದ್ದೂರಿ ಜೆಸಿ ಸಪ್ತಾಹವನ್ನು ಬೆಳ್ತಂಗಡಿಯ ಹಬ್ಬವಾಗಿ ಆಚರಿಸುತ್ತ ಬಂದಿರುತ್ತಾರೆ.ಈ ವರ್ಷ ವಿನೂತನವಾಗಿ ಸಪ್ತಾಹವನ್ನು ಆಚರಿಸುತ್ತಿದ್ದು ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸುತ್ತಿದ್ದಾರೆ. ವಿವಿಧ ಕ್ಷೇತ್ರದ ಸಾಧಕರಿಗೆ ಸಾಧನಾಶ್ರೀ, ಸಮಾಜ ಸೇವೆ ನೀಡುತ್ತಿರುವ 7 ಸಂಘ ಸಂಸ್ಥೆಗಳಿಗೆ ಸೇವಾಶ್ರೀ ಪುರಸ್ಕಾರ ನೀಡಿ ಗೌರವುಸಲಾಗುವುದು. ಜೊತೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಗೌರವ ಸನ್ಮಾನ ನಡೆಯಲಿದೆ. ತಾಲೂಕಿನ ಅದ್ಭುತ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಯುವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು.

ಜೆಸಿ ಸಪ್ತಾಹದ ಸಂಯೋಜಕಿ ಹೇಮಾವತಿ ಮಾತನಾಡಿ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇರವೇರಿಸಲಿದ್ದಾರೆ. ಹಲವಾರು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ್ದು ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯಮಟ್ಟದ ಡ್ಯಾನ್ಸ್ ಸ್ಪರ್ದೆ,ಆದರ್ಶ ದಂಪತಿ, ಫ್ಯಾಶನ್ ಶೋ,ಸ್ಟಾರ್ ಸಿಂಗರ್,ಕಥೆ ಎಡ್ಡೆ ಉಂಡು,ಎಕ್ಸೆಲ್ ಸಂಭ್ರಮ, ನೃತ್ಯ ಸಂಗಮ ನಡೆಯಲಿದೆ. ಜೊತೆಗೆ ಹಲವಾರು ಒಳಂಗಣ ಕ್ರೀಡಾಪಟುಗಳು ನಡೆಯುತ್ತದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಪೂರ್ವಾಧ್ಯಕ್ಷರಾದ ಚಿದಾನಂದ ಇಡ್ಯ, ನಾರಾಯಣ ಶೆಟ್ಟಿ, ಸಪ್ತಾಹದ ಸಹ ಸಂಯೋಜಕ ರಕ್ಷಿತ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya
error: Content is protected !!