September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ತೋಟತ್ತಾಡಿ, ಚಿಬಿದ್ರೆ ಇದರ ವತಿಯಿಂದ ಸಂಘದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪ್ರೇಮ ಹೊಸಮನೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳಾದ ವಿನುತಾ ಡಿ ಮಜಲು, ಉಷಾ ಡಿ ಮಜಲು, ಪ್ರಮೀಳಾ ಕಕ್ಕಿಂಜೆ, ಲೀಲಾವತಿ ಬರಮೇಲು, ಸುಶೀಲ ಕಲ್ಲಗುಡ್ಡೆ, ಮೋಹಿನಿ ಗುವೆದಕಂಡ, ಕು.ತೇಜಸ್ವಿನಿ ತೋಟತ್ತಾಡಿ, ಕು. ಮೋಕ್ಷಿತ ತೋಟತ್ತಾಡಿ, ಸುಜಾತಾ ಪೊಯ್ಯೇದಡ್ಡ, ಪುಷ್ಪ ಹಾರಗಂಡಿ, ಚಿನ್ನಮ್ಮ ಡಿ.ಮಜಲು, ಸರೋಜಿನಿ ಡಿ.ಮಜಲು, ಸುಮತಿ ಬರಮೇಲು, ಪ್ರೇಮ ಬರಮೇಲು, ವಿಶಾಲಾಕ್ಷಿ ಅರಮನೆ, ಕು. ಕೃತಿಕಾ ಡಿ.ಮಜಲು, ಕು.ಸಂಹಿತಾ ಡಿ.ಮಜಲು,ಕು. ಸಾನ್ವಿ ಅರಮನೆ, ಕು. ಸಾನಿಧ್ಯ ಅರಮನೆ, ಅದ್ವಿತ್ ಪೊಯ್ಯೇದಡ್ಡ, ಮತ್ತಿತರರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಹಿಳಾ ಬಿಲ್ಲವ ವೇದಿಕೆ ಎಲ್ಲ ಪದಾಧಿಕಾರಿಗಳಿಗೆ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಧನ್ಯವಾದ ಸಲ್ಲಿಸಿದರು. ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಮೂರ್ಜೆ ಎಲ್ಲ ಸದಸ್ಯರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಿದರು.

Related posts

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಉಜಿರೆ ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು

Suddi Udaya

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!