April 2, 2025
Uncategorized

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ದಿಡುಪೆ ಇದರ ಮಹಾಸಭೆಯು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಧ್ಯಕ್ಷ ಕೆ ಯು ಇಬ್ರಾಹಿಂ ರವರ ಸಭಾಧ್ಯಕ್ಷತೆಯಲ್ಲಿ ದಿಡುಪೆ ಮದ್ರಸದಲ್ಲಿ ನಡೆಯಿತು.

ವೇದಿಕೆಯಲ್ಲಿ ದರ್ಗಾ ಶರೀಫ್ ಕಾಜೂರು ಇದರ ಪ್ರದಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್, ಸದಸ್ಯರಾದ ಎನ್.ಎಮ್ ಯಾಕುಬ್ , ಸಿದ್ದಿಕ್ ಹೆ.ಹೆಚ್ , ಎ.ಯು ಮೊಹಮ್ಮದಲಿ, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
ಸಭೆಯಲ್ಲಿ ಸರ್ವಾನುಮತದದೊಂದಿಗೆ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಇದಿನಬ್ಬ ಅಡ್ಕ, ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಪಯ್ಯೇ, ಪ್ರ ,ಕಾರ್ಯದರ್ಶಿಯಾಗಿ ಅಬೂಬಕ್ಕರ್ ಫೈಝಿ, ಜೊತೆ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಶಿರ್ಲಾ, ಕೋಶಾಧಿಕಾರಿಯಾಗಿ ಎನ್.ಎ ಅಬೂಬಕ್ಕರ್, ಸದಸ್ಯರುಗಳಾಗಿ ಉಸ್ಮಾನ್ ಅಡ್ಕ, ಕಬೀರ್ ದಿಡುಪೆ, ಅಶ್ರಫ್ ಅಡ್ಕ, ಶರೀಫ್ ಪಯ್ಯೇ, ಅಬ್ದುಲ್ ರಹ್ಮನ್ ಬೆದ್ರಮಾರ್,
ನಿಝಮುದ್ದೀನ್ ಅಜಲ್ ನೆಕ್ಕಿ ಆಯ್ಕೆಯಾದರು.


ಸಭಾಧ್ಯಕ್ಷ ಕೆ ಯು ಇಬ್ರಾಹಿಂ ಶುಭ ಹಾರೈಸಿ, ಕಾರ್ಯದರ್ಶಿ ನಿಝಮ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಸ್ವಾಗತಿಸಿದರು. ಪ್ರಸ್ತುತ ಸಾಲಿನ ಅಧ್ಯಕ್ಷ ಇದಿನಬ್ಬ ಅಡ್ಕ ಧನ್ಯವಾದವಿತ್ತರು.

Related posts

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya
error: Content is protected !!