30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

ನಡ : “ಪ್ರತೀ ಸರ್ಕಾರೀ ಕಾಲೇಜು ಕೇವಲ ಅಂಕಗಳ ಹಿಂದೆ, ಫಲಿತಾಂಶದ ಹಿಂದೆ ಹೋಗುವುದಿಲ್ಲ.ಬದಲಾಗಿ ಮಕ್ಕಳ ಬದುಕಿನ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ.” ಎಂದು ಸರಕಾರೀ ಪದವಿ ಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿನ ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟಿಸ್ ನುಡಿದರು.

ಅವರು ನಡ ಸ. ಪ. ಪೂ. ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.


ಬೆಳ್ತಂಗಡಿಯ ಖ್ಯಾತ ನೋಟರಿ ವಕೀಲರಾದ ಮುರಳೀಧರ ಬಲಿಪ ಇವರು ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ನಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಹಿತಾಕಾಂಕ್ಷಿಗಳಾದ ಮುನಿರಾಜ ಅಜ್ರಿ, ಪ್ರವೀಣ್ ವಿ.ಜಿ., ಶ್ಯಾಮ್ ಸುಂದರ್, ಮೋಹನ್ ಬಾಬು, ಅಜಿತ್ ಆರಿಗ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಆರು ಮಂದಿ ವಿದ್ಯಾರ್ಥಿಗಳನ್ನು ‌ಸನ್ಮಾನಿಸಲಾಯಿತು. ರಾಜ್ಯ ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಿಶನ್ ಕುಮಾರ್ ಹಾಗೂ ಶ್ವೇತಾ ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕ್ರೀಡಾ ತರಬೇತುದಾರರಾದ ಅಜಿತ್ ರನ್ನು ಕೃತಜ್ಞತೆಯೊಂದಿಗೆ ಅಭಿನಂದಿಸಲಾಯಿತು. ಕ್ರೀಡಾ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಉಪನ್ಯಾಸಕರಾದ ವಸಂತಿ ಪಿ. ನಿರೂಪಿಸಿದ ಕಾರ್ಯಕ್ರಮದಲ್ಲಿ ಪವಿತ್ರ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕರಾದ ಲಿಲ್ಲಿ ಪಿ.ವಿ. ವರದಿ ವಾಚನಗೈದರು. ಪ್ರಾಂಶುಪಾಲರಾದ ಚಂದ್ರಶೇಖರ್ ಪ್ರಸ್ತಾವನೆಯ ನುಡಿಗಳೊಂದಿಗೆ ಸ್ವಾಗತಿಸಿದರು.

Related posts

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!