23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

ನಡ : “ಪ್ರತೀ ಸರ್ಕಾರೀ ಕಾಲೇಜು ಕೇವಲ ಅಂಕಗಳ ಹಿಂದೆ, ಫಲಿತಾಂಶದ ಹಿಂದೆ ಹೋಗುವುದಿಲ್ಲ.ಬದಲಾಗಿ ಮಕ್ಕಳ ಬದುಕಿನ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ.” ಎಂದು ಸರಕಾರೀ ಪದವಿ ಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿನ ಪ್ರಾಂಶುಪಾಲರಾದ ನೋರ್ಬರ್ಟ್ ಮಾರ್ಟಿಸ್ ನುಡಿದರು.

ಅವರು ನಡ ಸ. ಪ. ಪೂ. ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.


ಬೆಳ್ತಂಗಡಿಯ ಖ್ಯಾತ ನೋಟರಿ ವಕೀಲರಾದ ಮುರಳೀಧರ ಬಲಿಪ ಇವರು ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ನಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಹಿತಾಕಾಂಕ್ಷಿಗಳಾದ ಮುನಿರಾಜ ಅಜ್ರಿ, ಪ್ರವೀಣ್ ವಿ.ಜಿ., ಶ್ಯಾಮ್ ಸುಂದರ್, ಮೋಹನ್ ಬಾಬು, ಅಜಿತ್ ಆರಿಗ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಆರು ಮಂದಿ ವಿದ್ಯಾರ್ಥಿಗಳನ್ನು ‌ಸನ್ಮಾನಿಸಲಾಯಿತು. ರಾಜ್ಯ ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಿಶನ್ ಕುಮಾರ್ ಹಾಗೂ ಶ್ವೇತಾ ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕ್ರೀಡಾ ತರಬೇತುದಾರರಾದ ಅಜಿತ್ ರನ್ನು ಕೃತಜ್ಞತೆಯೊಂದಿಗೆ ಅಭಿನಂದಿಸಲಾಯಿತು. ಕ್ರೀಡಾ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.
ಉಪನ್ಯಾಸಕರಾದ ವಸಂತಿ ಪಿ. ನಿರೂಪಿಸಿದ ಕಾರ್ಯಕ್ರಮದಲ್ಲಿ ಪವಿತ್ರ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕರಾದ ಲಿಲ್ಲಿ ಪಿ.ವಿ. ವರದಿ ವಾಚನಗೈದರು. ಪ್ರಾಂಶುಪಾಲರಾದ ಚಂದ್ರಶೇಖರ್ ಪ್ರಸ್ತಾವನೆಯ ನುಡಿಗಳೊಂದಿಗೆ ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya
error: Content is protected !!