April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya
error: Content is protected !!