30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!