22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!