25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇವರ ಸಹಯೋಗದೊಂದಿಗೆ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಕಾನೂನು ಅರಿವು ಮಾಹಿತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳ್ತಂಗಡಿಯ ವಕೀಲರಾದ ಪ್ರತೀಕ್ಷಾ ಇವರು ವಿದ್ಯಾರ್ಥಿಗಳಿಗೆ, ವಾಹನ ಕಾಯ್ದೆಯ ಬಗ್ಗೆ ವಿವರಿಸಿ, ಸಂಚಾರ ನಿಯಮಗಳ ಬಗ್ಗೆ, ವಾಹನ ನೋಂದಣಿ ಬಗ್ಗೆ, ಪರವಾನಿಗೆಯ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ವಿದ್ಯಾರ್ಥಿ ಶ್ರೇಯಸ್ ಇವರು, ಸೈಬರ್ ಕ್ರೈಂ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಮಾತನಾಡಿದರು. ಹಾಗೂ ವಿವೇಕಾನಂದ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಆಶಿತಾ ಕೆ , ಕಾನೂನು ಶಿಕ್ಷಣದ ಮಹತ್ವವನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ.ಎ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ವಿದ್ಯಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಛಾಯ ಧನ್ಯವಾದಗೈದರು. ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್, ಗ್ರಾಮ ವಿಕಾಸ ಸಮಿತಿ, ಮಹಿಳಾ ಕೋಶ, ಎನ್ಎಸ್ಎಸ್ ಘಟಕ ಸಹಭಾಗಿತ್ವ ವಹಿಸಿದ್ದವು.

Related posts

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya
error: Content is protected !!