22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇವರ ಸಹಯೋಗದೊಂದಿಗೆ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಕಾನೂನು ಅರಿವು ಮಾಹಿತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳ್ತಂಗಡಿಯ ವಕೀಲರಾದ ಪ್ರತೀಕ್ಷಾ ಇವರು ವಿದ್ಯಾರ್ಥಿಗಳಿಗೆ, ವಾಹನ ಕಾಯ್ದೆಯ ಬಗ್ಗೆ ವಿವರಿಸಿ, ಸಂಚಾರ ನಿಯಮಗಳ ಬಗ್ಗೆ, ವಾಹನ ನೋಂದಣಿ ಬಗ್ಗೆ, ಪರವಾನಿಗೆಯ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ವಿದ್ಯಾರ್ಥಿ ಶ್ರೇಯಸ್ ಇವರು, ಸೈಬರ್ ಕ್ರೈಂ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಮಾತನಾಡಿದರು. ಹಾಗೂ ವಿವೇಕಾನಂದ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಆಶಿತಾ ಕೆ , ಕಾನೂನು ಶಿಕ್ಷಣದ ಮಹತ್ವವನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ.ಎ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ವಿದ್ಯಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಛಾಯ ಧನ್ಯವಾದಗೈದರು. ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್, ಗ್ರಾಮ ವಿಕಾಸ ಸಮಿತಿ, ಮಹಿಳಾ ಕೋಶ, ಎನ್ಎಸ್ಎಸ್ ಘಟಕ ಸಹಭಾಗಿತ್ವ ವಹಿಸಿದ್ದವು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya
error: Content is protected !!