24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ ನಡೆಯಿತು.

ಡಬ್ಲ್ಯೂಸಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರಭಟ್ ಸ್ವಾಗತಿಸಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಸಂಸ್ಥೆಯ ಮುಖಾಂತರ ಉಚಿತವಾಗಿ ಹತ್ತುಫಲಾನುಭವಿಗಳಿಗೆ ವಾಹನ ಚಾಲನ ತರಬೇತಿ ಕೊಡಿಸಿ ವಾಹನ ಚಾಲನ ಪರವಾನಿಗೆ ವಿತರಿಸಲಾಯಿತು. ಆಯ್ದ ಫಲನುಭವಿಗಳಿಗೆ ಎರಡು ಸಾವಿರ ಅಡಿಕೆ ಗಿಡ ತೆಂಗಿನ ಗಿಡ ನೂರು ಐನೂರು ಕೊಕೊ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅಡಿಕೆಬೆಳೆಗಳಿಗೆ ತಗಲುವ ರೋಗಗಳ ಮತ್ತು ಅದರ ನಿಯಂತ್ರಿಸುವ ಮಾಹಿತಿ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆಲ್ಲ ಪ್ರಗತಿಪರ ಕೃಷಿಕರಾದ ಶೈಲೇಂದ್ರ ಮರಾಠೆ ಈದು ಮಾಹಿತಿ ನೀಡಿದರು.

ವೇಣೂರಿನ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ ವಾಹನ ಚಾಲನ ಬಗ್ಗೆಲ್ಲ ವಿವರಿಸಿದರು. ಪ್ರಮಿಳಾ ಆರ್ ಭಟ್ ಧನ್ಯವಾದವಿತ್ತರು. ಸುಮಾರು ಎಂಬತ್ತು ರೈತರು ಭಾಗವಹಿಸಿದ್ದರು.,

Related posts

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya
error: Content is protected !!