23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ ನಡೆಯಿತು.

ಡಬ್ಲ್ಯೂಸಿ ಸಂಸ್ಥೆಯ ಕ್ಷೇತ್ರಾಧಿಕಾರಿಯಾದ ಕೆ.ರಾಮಚಂದ್ರಭಟ್ ಸ್ವಾಗತಿಸಿ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಸಂಸ್ಥೆಯ ಮುಖಾಂತರ ಉಚಿತವಾಗಿ ಹತ್ತುಫಲಾನುಭವಿಗಳಿಗೆ ವಾಹನ ಚಾಲನ ತರಬೇತಿ ಕೊಡಿಸಿ ವಾಹನ ಚಾಲನ ಪರವಾನಿಗೆ ವಿತರಿಸಲಾಯಿತು. ಆಯ್ದ ಫಲನುಭವಿಗಳಿಗೆ ಎರಡು ಸಾವಿರ ಅಡಿಕೆ ಗಿಡ ತೆಂಗಿನ ಗಿಡ ನೂರು ಐನೂರು ಕೊಕೊ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅಡಿಕೆಬೆಳೆಗಳಿಗೆ ತಗಲುವ ರೋಗಗಳ ಮತ್ತು ಅದರ ನಿಯಂತ್ರಿಸುವ ಮಾಹಿತಿ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆಲ್ಲ ಪ್ರಗತಿಪರ ಕೃಷಿಕರಾದ ಶೈಲೇಂದ್ರ ಮರಾಠೆ ಈದು ಮಾಹಿತಿ ನೀಡಿದರು.

ವೇಣೂರಿನ ಲಯನ್ಸ್ ಕ್ಲಬ್ ನ ನಿಕಟ ಪೂರ್ವ ಅಧ್ಯಕ್ಷ ನಿರಂಜನ ವಾಹನ ಚಾಲನ ಬಗ್ಗೆಲ್ಲ ವಿವರಿಸಿದರು. ಪ್ರಮಿಳಾ ಆರ್ ಭಟ್ ಧನ್ಯವಾದವಿತ್ತರು. ಸುಮಾರು ಎಂಬತ್ತು ರೈತರು ಭಾಗವಹಿಸಿದ್ದರು.,

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!