24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya
error: Content is protected !!