25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!