23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya
error: Content is protected !!