September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ತಿಳಿಸಿದ್ದರು.

ತಕ್ಷಣ ಮಹಿಳೆಯ ಪತಿ ಗೋವಿಂದ್ ರಾಜ್ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್’ ರವರಿಗೆ ಕರೆ ಮಾಡಿ ತಿಳಿಸಿದರು. ಅದರಂತೆ ಸ್ನೇಕ್ ಪ್ರಕಾಶ್’ ಮತ್ತು ನಳಿನ್ ಕುಮಾರ್ ಬೇಕಲ್ ಇಬ್ಬರು ಸತತ ಮೂರು ಗಂಟೆಗಳ ಕಾಲ ಹುಡುಕಾಡಿ ಮಹಿಳೆಯನ್ನು ಪತ್ತೆ ಹಚ್ಚಿ ಅವರಿಗೆ ಸಮಾಧಾನ ಹೇಳಿ, ಅವರಿಗೆ ಬೆಳಗಿನ ಉಪಹಾರ ನೀಡಿ ಅವರನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಅವರ ಮನೆಯವರಿಗೆ ಮಾಹಿತಿಯನ್ನು ತಿಳಿಸಿದರು. ಮನೆಯವರು ಬಂದು ಮಹಿಳೆಯನ್ನು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!