September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇವರ ಸಹಯೋಗದೊಂದಿಗೆ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಕಾನೂನು ಅರಿವು ಮಾಹಿತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳ್ತಂಗಡಿಯ ವಕೀಲರಾದ ಪ್ರತೀಕ್ಷಾ ಇವರು ವಿದ್ಯಾರ್ಥಿಗಳಿಗೆ, ವಾಹನ ಕಾಯ್ದೆಯ ಬಗ್ಗೆ ವಿವರಿಸಿ, ಸಂಚಾರ ನಿಯಮಗಳ ಬಗ್ಗೆ, ವಾಹನ ನೋಂದಣಿ ಬಗ್ಗೆ, ಪರವಾನಿಗೆಯ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ವಿದ್ಯಾರ್ಥಿ ಶ್ರೇಯಸ್ ಇವರು, ಸೈಬರ್ ಕ್ರೈಂ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಮಾತನಾಡಿದರು. ಹಾಗೂ ವಿವೇಕಾನಂದ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಆಶಿತಾ ಕೆ , ಕಾನೂನು ಶಿಕ್ಷಣದ ಮಹತ್ವವನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ.ಎ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ವಿದ್ಯಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಛಾಯ ಧನ್ಯವಾದಗೈದರು. ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್, ಗ್ರಾಮ ವಿಕಾಸ ಸಮಿತಿ, ಮಹಿಳಾ ಕೋಶ, ಎನ್ಎಸ್ಎಸ್ ಘಟಕ ಸಹಭಾಗಿತ್ವ ವಹಿಸಿದ್ದವು.

Related posts

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!