23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇವರ ಸಹಯೋಗದೊಂದಿಗೆ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಕಾನೂನು ಅರಿವು ಮಾಹಿತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬೆಳ್ತಂಗಡಿಯ ವಕೀಲರಾದ ಪ್ರತೀಕ್ಷಾ ಇವರು ವಿದ್ಯಾರ್ಥಿಗಳಿಗೆ, ವಾಹನ ಕಾಯ್ದೆಯ ಬಗ್ಗೆ ವಿವರಿಸಿ, ಸಂಚಾರ ನಿಯಮಗಳ ಬಗ್ಗೆ, ವಾಹನ ನೋಂದಣಿ ಬಗ್ಗೆ, ಪರವಾನಿಗೆಯ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ವಿದ್ಯಾರ್ಥಿ ಶ್ರೇಯಸ್ ಇವರು, ಸೈಬರ್ ಕ್ರೈಂ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಮಾತನಾಡಿದರು. ಹಾಗೂ ವಿವೇಕಾನಂದ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಆಶಿತಾ ಕೆ , ಕಾನೂನು ಶಿಕ್ಷಣದ ಮಹತ್ವವನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ.ಎ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ವಿದ್ಯಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಛಾಯ ಧನ್ಯವಾದಗೈದರು. ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್, ಗ್ರಾಮ ವಿಕಾಸ ಸಮಿತಿ, ಮಹಿಳಾ ಕೋಶ, ಎನ್ಎಸ್ಎಸ್ ಘಟಕ ಸಹಭಾಗಿತ್ವ ವಹಿಸಿದ್ದವು.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya
error: Content is protected !!