September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

ಬೆಳ್ತಂಗಡಿ: ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರಾದ ಘಟನೆ ನಡೆದಿದ್ದು, ಚಿಕಿತ್ಸೆ ಒದಗಿಸಿದವರು ಸಾರ್ವಜನಿಕವಾಗಿ ಪ್ರಸಂಸೆಗೆ ಒಳಗಾಗಿದ್ದಾರೆ

    ಮಂಗಳೂರು ಕೆ.ಎಂ.ಸಿ.ಆಸ್ಪತ್ರೆಯ ಸಿಬ್ಬಂದಿ ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ಅವರು ಸಕಾಲದಲ್ಲಿ ಚಿಕಿತ್ಸೆ ಒದಗಿಸಿದ್ದು ಹೃದಯಘಾತಕ್ಕೊಳಗಾದ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ಮಿಥುನ್ ಅವರು ಸಾವಿನಿಂದ ಪಾರಾಗಿದ್ದಾರೆ.

    ಘಟನೆ ವಿವರ : ಮಿಥುನ್ ಅವರು ಲಘು ಹೃಯಘಾತಕ್ಕೊಳಗಾಗಿದ್ದು, ಅವರ ಇಸಿಜಿ ರಿಪೋರ್ಟ್ ನ್ನು ಅವರ ಸಂಬಂಧಿಕರು ಪ್ರದೀಪ್ ನಾಯಕ್ ಕಳುಹಿಸಿದ್ದರು. ಈ ವರದಿಯನ್ನು ಪ್ರದೀಪ್ ನಾಯಕ್ ಅವರು ಖ್ಯಾತ ಹೃದಯತಜ್ಞ ಡಾ| ಪದ್ಮನಾಭ ಕಾಮತ್ ಅವರಿಗೆ ಕಳುಹಿಸಿದ್ದರು. ವರದಿಯನ್ನು ನೋಡಿ ಕಾಮತ್ ಅವರು ತಕ್ಷಣವೇ ರೋಗಿಯನ್ನು ಮಂಗಳೂರು ಆಸ್ಪತ್ರೆಗೆ ಕರೆತರಲು ಸೂಚಿಸಿದ್ದರು.ಅದರಂತೆ ಉಪ್ಪಿನಂಗಡಿ ಬಳಿಯ ತಣ್ಣೀರುಪಂತ ಅಳಕೆಯಿಂದ ಮಿಥುನ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಮಂಗಳೂರಿಗೆ ಬರುತ್ತಿದ್ದರು. ಇದೇ ವೇಳೆ ಪ್ರದೀಪ್ ನಾಯಕ್ ಅವರು ತನ್ನ ಮನೆಯಿಂದ ಬಸ್ಸಿನಲ್ಲಿ ಹೊರಟಿದ್ದರು. ಮಿಥುನ್ ಅವರು ಪುಂಜಾಲಕಟ್ಟೆ ಕಳೆದು ಸಾಗುತ್ತಿರುವಾಗ ಅವರಿಗೆ ಎದೆನೋವು ತೀವ್ರವಾಯಿತು. ಈ ವಿಚಾರ ತಿಳಿದ ಪ್ರದೀಪ್ ನಾಯಕ್ ಅವರು ವಗ್ಗ ಬಳಿ ಬಸ್ಸಿನಿಂದ ಇಳಿದು,ಮಿಥುನ್ ಅವರಿಗಾಗಿ ಕಾದಿದ್ದರು.ಅವರ ಬಳಿ ಹೃದಯಾಘಾತವಾದ ಕೂಡಲೇ ಅಗತ್ಯವಾಗಿ ನೀಡಬೇಕಾದ ಔಷಧಿಯನ್ನು ಇರಿಸಿಕೊಂಡಿದ್ದು, ರೋಗಿಗೆ ನೀಡಿದರು. ಇದರಿಂದ ಮಿಥುನ್ ಅವರಿಗೆ ಮತ್ತೆ ಹೃದಯಾಘಾತವಾಗುವುದು ತಪ್ಪಿತು. ಬಳಿಕ ಅವರು ಅದೇ ಕಾರಿನಲ್ಲಿ ಮಂಗಳೂರಿಗೆ ಸಾಗುತ್ತಿರುವಾಗ ಟ್ರಾಫಿಕ್ ಜಾಮ್ ಇರುವ ಕಾರಣ ಕೆ.ಎಂ.ಸಿ.ಯ ಅಂಬ್ಯುಲೆನ್ಸ್ ವಾಹನಕ್ಕೆ ಕರೆ ಮಾಡಿ ಬರಿಸಿ, ರೋಗಿಯನ್ನು ಶೀಘ್ರವಾಗಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದರು.

    ‌ ಇದೀಗ ಮಿಥುನ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆರೋಗ್ಯವಾಗಿದ್ದಾರೆ ಎಂದು ವೈದ್ಯ ಡಾ| ಪದ್ಮನಾಭ ಕಾಮತ್ ತಿಳಿಸಿದ್ದು, ಪ್ರದೀಪ್ ನಾಯಕ್ ಅವರ ಸಕಾಲಿಕ ಕಾರ್ಯವೈಖರಿಗೆ ಶ್ಲಾಘನೆಯನ್ನು ಅವರು ತಿಳಿಸಿದ್ದಾರೆ.

    Related posts

    ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

    Suddi Udaya

    ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

    Suddi Udaya

    ಅಜ್ಜ–ಅಜ್ಜಿಯರೊಂದಿಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳ ಆತ್ಮೀಯ ಸಮಾಗಮ

    Suddi Udaya

    ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

    Suddi Udaya

    ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

    Suddi Udaya

    ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

    Suddi Udaya
    error: Content is protected !!