23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

ಬೆಳ್ತಂಗಡಿ: ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರಾದ ಘಟನೆ ನಡೆದಿದ್ದು, ಚಿಕಿತ್ಸೆ ಒದಗಿಸಿದವರು ಸಾರ್ವಜನಿಕವಾಗಿ ಪ್ರಸಂಸೆಗೆ ಒಳಗಾಗಿದ್ದಾರೆ

    ಮಂಗಳೂರು ಕೆ.ಎಂ.ಸಿ.ಆಸ್ಪತ್ರೆಯ ಸಿಬ್ಬಂದಿ ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ಅವರು ಸಕಾಲದಲ್ಲಿ ಚಿಕಿತ್ಸೆ ಒದಗಿಸಿದ್ದು ಹೃದಯಘಾತಕ್ಕೊಳಗಾದ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ಮಿಥುನ್ ಅವರು ಸಾವಿನಿಂದ ಪಾರಾಗಿದ್ದಾರೆ.

    ಘಟನೆ ವಿವರ : ಮಿಥುನ್ ಅವರು ಲಘು ಹೃಯಘಾತಕ್ಕೊಳಗಾಗಿದ್ದು, ಅವರ ಇಸಿಜಿ ರಿಪೋರ್ಟ್ ನ್ನು ಅವರ ಸಂಬಂಧಿಕರು ಪ್ರದೀಪ್ ನಾಯಕ್ ಕಳುಹಿಸಿದ್ದರು. ಈ ವರದಿಯನ್ನು ಪ್ರದೀಪ್ ನಾಯಕ್ ಅವರು ಖ್ಯಾತ ಹೃದಯತಜ್ಞ ಡಾ| ಪದ್ಮನಾಭ ಕಾಮತ್ ಅವರಿಗೆ ಕಳುಹಿಸಿದ್ದರು. ವರದಿಯನ್ನು ನೋಡಿ ಕಾಮತ್ ಅವರು ತಕ್ಷಣವೇ ರೋಗಿಯನ್ನು ಮಂಗಳೂರು ಆಸ್ಪತ್ರೆಗೆ ಕರೆತರಲು ಸೂಚಿಸಿದ್ದರು.ಅದರಂತೆ ಉಪ್ಪಿನಂಗಡಿ ಬಳಿಯ ತಣ್ಣೀರುಪಂತ ಅಳಕೆಯಿಂದ ಮಿಥುನ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಮಂಗಳೂರಿಗೆ ಬರುತ್ತಿದ್ದರು. ಇದೇ ವೇಳೆ ಪ್ರದೀಪ್ ನಾಯಕ್ ಅವರು ತನ್ನ ಮನೆಯಿಂದ ಬಸ್ಸಿನಲ್ಲಿ ಹೊರಟಿದ್ದರು. ಮಿಥುನ್ ಅವರು ಪುಂಜಾಲಕಟ್ಟೆ ಕಳೆದು ಸಾಗುತ್ತಿರುವಾಗ ಅವರಿಗೆ ಎದೆನೋವು ತೀವ್ರವಾಯಿತು. ಈ ವಿಚಾರ ತಿಳಿದ ಪ್ರದೀಪ್ ನಾಯಕ್ ಅವರು ವಗ್ಗ ಬಳಿ ಬಸ್ಸಿನಿಂದ ಇಳಿದು,ಮಿಥುನ್ ಅವರಿಗಾಗಿ ಕಾದಿದ್ದರು.ಅವರ ಬಳಿ ಹೃದಯಾಘಾತವಾದ ಕೂಡಲೇ ಅಗತ್ಯವಾಗಿ ನೀಡಬೇಕಾದ ಔಷಧಿಯನ್ನು ಇರಿಸಿಕೊಂಡಿದ್ದು, ರೋಗಿಗೆ ನೀಡಿದರು. ಇದರಿಂದ ಮಿಥುನ್ ಅವರಿಗೆ ಮತ್ತೆ ಹೃದಯಾಘಾತವಾಗುವುದು ತಪ್ಪಿತು. ಬಳಿಕ ಅವರು ಅದೇ ಕಾರಿನಲ್ಲಿ ಮಂಗಳೂರಿಗೆ ಸಾಗುತ್ತಿರುವಾಗ ಟ್ರಾಫಿಕ್ ಜಾಮ್ ಇರುವ ಕಾರಣ ಕೆ.ಎಂ.ಸಿ.ಯ ಅಂಬ್ಯುಲೆನ್ಸ್ ವಾಹನಕ್ಕೆ ಕರೆ ಮಾಡಿ ಬರಿಸಿ, ರೋಗಿಯನ್ನು ಶೀಘ್ರವಾಗಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದರು.

    ‌ ಇದೀಗ ಮಿಥುನ್ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆರೋಗ್ಯವಾಗಿದ್ದಾರೆ ಎಂದು ವೈದ್ಯ ಡಾ| ಪದ್ಮನಾಭ ಕಾಮತ್ ತಿಳಿಸಿದ್ದು, ಪ್ರದೀಪ್ ನಾಯಕ್ ಅವರ ಸಕಾಲಿಕ ಕಾರ್ಯವೈಖರಿಗೆ ಶ್ಲಾಘನೆಯನ್ನು ಅವರು ತಿಳಿಸಿದ್ದಾರೆ.

    Related posts

    ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

    Suddi Udaya

    ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

    Suddi Udaya

    ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

    Suddi Udaya

    ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

    Suddi Udaya

    ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

    Suddi Udaya

    ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

    Suddi Udaya
    error: Content is protected !!