25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

ಪುತ್ತೂರು: ಸೇವಾಭಾರತಿ ಸೇವಾಧಾಮ ಇದರ ಆಶ್ರಯದಲ್ಲಿ ಆದರ್ಶ ಆಸ್ಪತ್ರೆ, ಪುತ್ತೂರು ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು ಇವರ ಸಹಯೋಗದಲ್ಲಿ ಎಂ. ಸಂಜೀವ ಶೆಟ್ಟಿ, ಜವಳಿ ವ್ಯಾಪಾರಸ್ಥರು ಪುತ್ತೂರು ಮತ್ತು ಸೋಜಾ ಮೆಟಲ್ ಮಾರ್ಟ್, ಪುತ್ತೂರು ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜನಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಡಿಸೆಂಬರ್ 09 ರಂದು ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಗಾಲಿಕುರ್ಚಿ ಜಾಥಾವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹಸಿರು ನಿಶಾನೆಯನ್ನು ತೋರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಹಾಲಿಂಗೇಶ್ವರ ದೇವಸ್ಥಾನದಿಂದ ಪ್ರಾರಂಭಿಸಿ ಮೈ ದೇ ದೇವುಸ್ ಚರ್ಚ್ ಮುಂಭಾಗದಿಂದ ಎಪಿಎಂಸಿ ರಸ್ತೆ ಮುಖಾಂತರ ಆದರ್ಶ ಆಸ್ಪತ್ರೆಯ ತನಕ ಜಾಥಾವನ್ನು ಮಾಡಲಾಯಿತು. ಒಟ್ಟು 15 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಅರೈಕೆದಾರರು, ಪೊಲೀಸ್ ಸಿಬ್ಬಂದಿಗಳು, ಸೇವಾಭಾರತಿ ಸಿಬ್ಬಂದಿವರ್ಗದವರು, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya
error: Content is protected !!