24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

ಕೊಯ್ಯೂರು : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಕೊಯ್ಯೂರಿನಲ್ಲಿ ನಡೆದಿದೆ.

ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋದರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಕೊಯ್ಯೂರು ಗ್ರಾಮದ ಗಿರಿಗುಡ್ಡೆ(ಜಾಲ್) ,ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ(38) ಎಂಬಾತ ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ.

ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya
error: Content is protected !!