29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

ಕೊಯ್ಯೂರು : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಕೊಯ್ಯೂರಿನಲ್ಲಿ ನಡೆದಿದೆ.

ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋದರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಕೊಯ್ಯೂರು ಗ್ರಾಮದ ಗಿರಿಗುಡ್ಡೆ(ಜಾಲ್) ,ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ(38) ಎಂಬಾತ ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ.

ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya
error: Content is protected !!