22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

ಕೊಯ್ಯೂರು : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಕೊಯ್ಯೂರಿನಲ್ಲಿ ನಡೆದಿದೆ.

ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋದರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಕೊಯ್ಯೂರು ಗ್ರಾಮದ ಗಿರಿಗುಡ್ಡೆ(ಜಾಲ್) ,ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ(38) ಎಂಬಾತ ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ.

ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related posts

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!