ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

ಪುತ್ತೂರು: ಸೇವಾಭಾರತಿ ಸೇವಾಧಾಮ ಇದರ ಆಶ್ರಯದಲ್ಲಿ ಆದರ್ಶ ಆಸ್ಪತ್ರೆ, ಪುತ್ತೂರು ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು ಇವರ ಸಹಯೋಗದಲ್ಲಿ ಎಂ. ಸಂಜೀವ ಶೆಟ್ಟಿ, ಜವಳಿ ವ್ಯಾಪಾರಸ್ಥರು ಪುತ್ತೂರು ಮತ್ತು ಸೋಜಾ ಮೆಟಲ್ ಮಾರ್ಟ್, ಪುತ್ತೂರು ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜನಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಡಿಸೆಂಬರ್ 09 ರಂದು ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಗಾಲಿಕುರ್ಚಿ ಜಾಥಾವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹಸಿರು ನಿಶಾನೆಯನ್ನು ತೋರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಹಾಲಿಂಗೇಶ್ವರ ದೇವಸ್ಥಾನದಿಂದ ಪ್ರಾರಂಭಿಸಿ ಮೈ ದೇ ದೇವುಸ್ ಚರ್ಚ್ ಮುಂಭಾಗದಿಂದ ಎಪಿಎಂಸಿ ರಸ್ತೆ ಮುಖಾಂತರ ಆದರ್ಶ ಆಸ್ಪತ್ರೆಯ ತನಕ ಜಾಥಾವನ್ನು ಮಾಡಲಾಯಿತು. ಒಟ್ಟು 15 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಅರೈಕೆದಾರರು, ಪೊಲೀಸ್ ಸಿಬ್ಬಂದಿಗಳು, ಸೇವಾಭಾರತಿ ಸಿಬ್ಬಂದಿವರ್ಗದವರು, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

Related posts

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya
error: Content is protected !!