September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

ಕೊಯ್ಯೂರು : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಕೊಯ್ಯೂರಿನಲ್ಲಿ ನಡೆದಿದೆ.

ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋದರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಕೊಯ್ಯೂರು ಗ್ರಾಮದ ಗಿರಿಗುಡ್ಡೆ(ಜಾಲ್) ,ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ(38) ಎಂಬಾತ ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ.

ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related posts

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!