23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ. ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.

ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.

Related posts

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
error: Content is protected !!