July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ.4,೦೦,೦೦೦/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ|| ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.

Related posts

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!