September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ.4,೦೦,೦೦೦/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ|| ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya
error: Content is protected !!