23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

ತಣ್ಣೀರುಪಂತ: ನೇಪಾಳದಲ್ಲಿ ನ.28ರಿಂದ ಡಿ.2ರವರೆಗೆ ನೇಪಾಳ ಪಿಸಿಎ ಸ್ಪೋಟ್ ೯ ಇವೆಂಟ್ಸ್ ಮ್ಯಾನೇಜ್ಮೆಂಟ್ ಆಯೋಜಿಸಿರುವ ಇಂಡೋ- ನೇಪಾಳ ಅಂತಾರಾಷ್ಟ್ರೀಯ ಆಹ್ವಾನಿತ ಪುರುಷ ಮತ್ತು ಮಹಿಳೆಯರ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್-2024ರಲ್ಲಿ ಅಂತಾರಾಷ್ಟ್ರೀಯ ವಾಲಿಬಾಲ್ ಟೂರ್ನಮೆಂಟ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಬೆಳ್ತಂಗಡಿಯ ಧೃತೇಶ್ ಸಿ. ಪಕ್ಕಳ ಚಿನ್ನದ ಪದಕ ಪಡೆದಿದ್ದಾರೆ.

ಗೋವಾದಲ್ಲಿ ಯುವ ಮತ್ತು ಕ್ರೀಡಾ ಪ್ರಮೋಷನ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ 4ನೇ ವೈಎಸ್‌ಪಿಎ ರಾಷ್ಟ್ರೀಯ ವಾಲಿಬಾಲ್ ಫೆಡರೇಶನ್ ಕಪ್- 2024ರಲ್ಲಿ ಬೆಳ್ತಂಗಡಿ ತಾಲೂಕಿನ ಧೃತೇಶ್ ಸಿ. ಪಕ್ಕಳ ಪ್ರತಿನಿಧಿಸಿರುವ ಕರ್ನಾಟಕ ತಂಡ ಚಿನ್ನದ ಪದಕ ಗಳಿಸಿದ್ದು, ಅಂತಾರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದರು.

ಇವರು ಪುತ್ತಿಲ ಗ್ರಾಮದ ಕುಂಡಡ್ಕದ, ಮಡಂತ್ಯಾರು ಶ್ರೀ ದೇವಿ ಟ್ರಾವೆಲ್ಸ್ ಮಾಲಕ ಚಂದ್ರಹಾಸ ಪಕ್ಕಳ – ಮಡಂತ್ಯಾರು ಮಹಿಳಾ ಮಂಡಲದ ಕಾರ್ಯದರ್ಶಿ ರೋಹಿಣಿ ಸಿ. ಪಕ್ಕಳ ದಂಪತಿ ಪುತ್ರ. ದೆಹಲಿಯಲ್ಲಿ 2023ರಲ್ಲಿ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ನಡೆದ 44ನೇ ಸಬ್ ಜ್ಯೂನಿಯರ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.

ಶಾಲಾ ದಿನಗಳಲ್ಲಿಯೇ ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಧೃತೇಶ್, ಪ್ರಸ್ತುತ ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ. ಪ್ರಾಥಮಿಕ ಶಿಕ್ಷಣವನ್ನು ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿ ಪದವಿ ಪೂರ್ವ ಶಿಕ್ಷಣವನ್ನು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಪೂರೈಸಿದ್ದಾರೆ. ಇವರಿಗೆ ಪ್ರವೀಣ್ ಉಜಿರೆ, ಸುಧೀನ್ ಪೂಜಾರಿ ಉಜಿರೆ, ಸಂದೇಶ್ ಪೂಂಜ ಉಜಿರೆ, ಕೌಶಲ್ ಮಂಗಳೂರು ಮತ್ತು ಅರುಣ್ ಮಾರ್ಗದರ್ಶನ ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya
error: Content is protected !!