23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

ಉಜಿರೆ:ಡಿ.10. ವಾಣಿ ಪಿಯು ಕಾಲೇಜು, ಹಳೆಕೋಟೆ ಬೆಳ್ತಂಗಡಿ, ಇದರ ವಿಂಶತಿ ಸಂಭ್ರಮದ ಆಚರಣೆಯ ಅಂಗವಾಗಿ ಪ್ರತಿಷ್ಠಿತ “ಉತ್ಕರ್ಷ 2024” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆಯಲ್ಲಿ ಆಯೋಜಿಸಲಾಗಿತ್ತು.

ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳು ತಮ್ಮ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿ, ಹಲವಾರು ಬಹುಮಾನಗಳನ್ನು ಪಡೆದರು.

ನಿಧಿ ವಿಹಾರ ಸ್ಪರ್ಧೆಯಲ್ಲಿ ಯಶಸ್ ಮತ್ತು ಅನ್ವಯ್ ಮೂರನೇ ಸ್ಥಾನ, ವರ್ತಿಕ (ವರದಿಗಾರಿಕೆ) ಸ್ಪರ್ಧೆಯಲ್ಲಿ ಶ್ರೀಮಾ ಮತ್ತು ಚಂಪಾ ಎರಡನೇ ಸ್ಥಾನ, ನೃತ್ಯ ಪ್ರತಿಭಾ ಸ್ಪರ್ಧೆಯಲ್ಲಿ ಧೃತಿ, ಧನ್ವಿ ಭಂಡಾರಿ, ಧನ್ವಿ, ವೈಷ್ಣವಿ, ಅಹನಾ, ತುಷಾರ್, ದೀಕ್ಷಿತಾ, ಮನ್ವಿತಾ ಮತ್ತು ಪ್ರೇರಣಾ ಪ್ರಥಮ ಸ್ಥಾನ, ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಸಮ್ಮೇದ್, ಕನಿಷ್ಕ, ಅಕ್ಷಮ್ ಮತ್ತು ಗೌರವ್ ಪ್ರಥಮ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ನಿನಾದ್ ಮತ್ತು ತೇಜಸ್ ಪ್ರಥಮ ಸ್ಥಾನ ಪಡೆದು ಶಾಲೆ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಗೆ ಭಾಜನವಾಗಿದೆ.

ವಿಜೇತರಾದ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!