April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

ಉಜಿರೆ:ಡಿ.10. ವಾಣಿ ಪಿಯು ಕಾಲೇಜು, ಹಳೆಕೋಟೆ ಬೆಳ್ತಂಗಡಿ, ಇದರ ವಿಂಶತಿ ಸಂಭ್ರಮದ ಆಚರಣೆಯ ಅಂಗವಾಗಿ ಪ್ರತಿಷ್ಠಿತ “ಉತ್ಕರ್ಷ 2024” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆಯಲ್ಲಿ ಆಯೋಜಿಸಲಾಗಿತ್ತು.

ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳು ತಮ್ಮ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿ, ಹಲವಾರು ಬಹುಮಾನಗಳನ್ನು ಪಡೆದರು.

ನಿಧಿ ವಿಹಾರ ಸ್ಪರ್ಧೆಯಲ್ಲಿ ಯಶಸ್ ಮತ್ತು ಅನ್ವಯ್ ಮೂರನೇ ಸ್ಥಾನ, ವರ್ತಿಕ (ವರದಿಗಾರಿಕೆ) ಸ್ಪರ್ಧೆಯಲ್ಲಿ ಶ್ರೀಮಾ ಮತ್ತು ಚಂಪಾ ಎರಡನೇ ಸ್ಥಾನ, ನೃತ್ಯ ಪ್ರತಿಭಾ ಸ್ಪರ್ಧೆಯಲ್ಲಿ ಧೃತಿ, ಧನ್ವಿ ಭಂಡಾರಿ, ಧನ್ವಿ, ವೈಷ್ಣವಿ, ಅಹನಾ, ತುಷಾರ್, ದೀಕ್ಷಿತಾ, ಮನ್ವಿತಾ ಮತ್ತು ಪ್ರೇರಣಾ ಪ್ರಥಮ ಸ್ಥಾನ, ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಸಮ್ಮೇದ್, ಕನಿಷ್ಕ, ಅಕ್ಷಮ್ ಮತ್ತು ಗೌರವ್ ಪ್ರಥಮ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ನಿನಾದ್ ಮತ್ತು ತೇಜಸ್ ಪ್ರಥಮ ಸ್ಥಾನ ಪಡೆದು ಶಾಲೆ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಗೆ ಭಾಜನವಾಗಿದೆ.

ವಿಜೇತರಾದ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!