25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

ಉಜಿರೆ:ಡಿ.10. ವಾಣಿ ಪಿಯು ಕಾಲೇಜು, ಹಳೆಕೋಟೆ ಬೆಳ್ತಂಗಡಿ, ಇದರ ವಿಂಶತಿ ಸಂಭ್ರಮದ ಆಚರಣೆಯ ಅಂಗವಾಗಿ ಪ್ರತಿಷ್ಠಿತ “ಉತ್ಕರ್ಷ 2024” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆಯಲ್ಲಿ ಆಯೋಜಿಸಲಾಗಿತ್ತು.

ಈ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳು ತಮ್ಮ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿ, ಹಲವಾರು ಬಹುಮಾನಗಳನ್ನು ಪಡೆದರು.

ನಿಧಿ ವಿಹಾರ ಸ್ಪರ್ಧೆಯಲ್ಲಿ ಯಶಸ್ ಮತ್ತು ಅನ್ವಯ್ ಮೂರನೇ ಸ್ಥಾನ, ವರ್ತಿಕ (ವರದಿಗಾರಿಕೆ) ಸ್ಪರ್ಧೆಯಲ್ಲಿ ಶ್ರೀಮಾ ಮತ್ತು ಚಂಪಾ ಎರಡನೇ ಸ್ಥಾನ, ನೃತ್ಯ ಪ್ರತಿಭಾ ಸ್ಪರ್ಧೆಯಲ್ಲಿ ಧೃತಿ, ಧನ್ವಿ ಭಂಡಾರಿ, ಧನ್ವಿ, ವೈಷ್ಣವಿ, ಅಹನಾ, ತುಷಾರ್, ದೀಕ್ಷಿತಾ, ಮನ್ವಿತಾ ಮತ್ತು ಪ್ರೇರಣಾ ಪ್ರಥಮ ಸ್ಥಾನ, ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಸಮ್ಮೇದ್, ಕನಿಷ್ಕ, ಅಕ್ಷಮ್ ಮತ್ತು ಗೌರವ್ ಪ್ರಥಮ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ನಿನಾದ್ ಮತ್ತು ತೇಜಸ್ ಪ್ರಥಮ ಸ್ಥಾನ ಪಡೆದು ಶಾಲೆ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಗೆ ಭಾಜನವಾಗಿದೆ.

ವಿಜೇತರಾದ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya
error: Content is protected !!