24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!