April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya
error: Content is protected !!