25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya
error: Content is protected !!