July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ.4,೦೦,೦೦೦/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ|| ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya
error: Content is protected !!