23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ.4,೦೦,೦೦೦/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ|| ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.

Related posts

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!