25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

ಪದ್ಮುಂಜ: ಭಾರತದ ಋಷಿ ಪರಂಪರೆಯ ಯೋಗ ವಿದ್ಯೆಯು ಜನ ಸಾಮಾನ್ಯರ ಆರೋಗ್ಯಕ್ಕೆ ಒಳ್ಳೆಯ ಸಾಧನ, ಯೋಗ ಅಭ್ಯಾಸ ಆರೋಗ್ಯವಂತ ದೀರ್ಘಾಯುಷ್ಯವನ್ನು ಪಡೆಯಬಹುದು. ಹಿಂದಿನ ಕಾಲದಲ್ಲಿ ಋಷಿ ಮುನಿಗಳು ಯೋಗ ವಿದ್ಯೆಯನ್ನು ಜನರಿಗೆ ನೀಡಿದರು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಮುಂಡೂರು, ಧರ್ಮದರ್ಶಿ ಆನಂದ ಗೌಡ ಮುಂಡೂರು ಅವರು ಪದ್ಮುಂಜ ಕೃಷಿ ಪತ್ತಿನ ಸಹಕಾರಿ ನಿಯಮಿತ ಪದ್ಮುಂಜ ಇದರ ವಠಾರದಲ್ಲಿ ಆವಿಷ್ಕಾರ ಯೋಗ ಮಂಗಳೂರು ಹಾಗೂ 13 ಸಹ ಸಂಘಟನೆಗಳ ನೇತೃತ್ವದ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮನೋಹರ ಅಂತರ, ಮೊಕ್ತೇಸರರು ಶ್ರೀ ಕ್ಷೇತ್ರ ಮುಗೇರಡ್ಕ ಶ್ರೀಮತಿ ಶಾರದಾ ರೈ ಮುಗೆರೋಡಿ ಉಪಸ್ಥಿತರಿದ್ದರು. ಅಶೋಕ ಗೌಡ ಪಾಂಜಾಳ ಉಪಧ್ಯಕ್ಷರು. ಸಿ.ಎ. ಬ್ಯಾಂಕು, ಪದ್ಮುಂಜ ದೀಪ ಪ್ರಜ್ವಲನ ಮಾಡಿಸಿದರು. ಯೋಗ ಗುರು ಕುಶಾಲಪ್ಪ ಗೌಡ ಪ್ರಸ್ತಾವಿಕವಾಗಿ ಮಾತನಾಡಿದ ಶಿಬಿರದ ಉಪದೇಶವನ್ನು ಹೇಳಿದರು. ಉದಯ ಬಿ.ಕೆ ನ್ಯಾಯವಾದಿ, ಕಾರ್ಯಕ್ರಮ ನಿರೂಪಿಸಿದರು.

Related posts

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ: ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!