May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

ಶತಮಾನಗಳಿಂದ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೆಳಗಾವಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ರಸ್ತೆ , ವಿದ್ಯುತ್ ಇಲ್ಲದೆ ಆದಿವಾಸಿಗಳು ವಾಸಿಸುತ್ತಿದ್ದಾರೆ. ಇಂದಿಗೂ ಚಿಮಿಣಿ ದೀಪದಲ್ಲಿ ಜೀವಿಸುಂತಾಗಿದೆ. ರಸ್ತೆ ಇಲ್ಲದೆ ಹತ್ತಾರು ಕಿಮೀ ನಡೆದುಕೊಂಡೇ ನದಿ , ಹಳ್ಳ , ತೊರೆಗಳನ್ನು ದಾಟಿ ಹೋಗಬೇಕಾಗಿದೆ ಎಂದು ಸಮಸ್ಯೆಯ ಗಂಭೀರತೆಯನ್ನು ಮುಖ್ಯಮಂತ್ರಿಗಳ ಗಮನ ಸೆಳೆದರು. ಜೊತೆಗೆ ಇತರ ಆದಿವಾಸಿ ಕಾಲನಿಗಳೂ ಮೂಲಭೂತ ಸೌಕರ್ಯ ವಂಚಿತವಾಗಿದೆ. ಇದಕ್ಕಾಗಿ ವಿಶೇಷ ಅನುದಾನ ಬೆಳ್ತಂಗಡಿ ತಾಲೂಕಿಗೆ ಬಿಡುಗಡೆ ಮಾಡಲು ವಿನಂತಿಸಿದರು. ಇದೇ ಸಂದರ್ಭದಲ್ಲಿ ಈಗಾಗಲೇ ರಾಜ್ಯದ ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿರುವ ಬಗ್ಗೆ ಅಭಿನಂದನೆ ಸಲ್ಲಿಸಿದರು.

Related posts

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya
error: Content is protected !!