23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ನಡೆಯಿತು.

ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ದೀಪ ಪ್ರಜ್ವಲಿಸಿ ಸೆಂಟರ್ ನ್ನು ಉದ್ಘಾಟಿಸಿ ಶುಭ ಕೋರಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ತಣ್ಣೀರುಪಂತ ಗ್ರಾ‌‌.ಪಂ ಅಧ್ಯಕ್ಷೆ ಹೇಮಾವತಿ ಎಂ., ಹಿರಿಯರಾದ ಧರ್ಮಪ್ಪ ಗೌಡ ಹಾಗೂ ದಾಸಪ್ಪ ಗೌಡ, ವೈದ್ಯರಾದ ಸಂತೋಷ್, ವೈದ್ಯೆ ಬುಸ್ರಿಫಾ, ಉದ್ಯಮಿ ಪ್ರಶಾಂತ್ ಕುಮಾರ್ ಬಾರ್ಯ, ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಉದ್ಯೋಗಿ ಸೂರಪ್ಪ ಪೂಜಾರಿ, ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಪೂಜಾರಿ ಗೇರುಕಟ್ಟೆ, ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಆಡಳಿತ ಮಂಡಳಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಪೂಜಾರಿ ಅಳಕ್ಕೆ, ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಜಯವಿಕ್ರಮ್ ಕಲ್ಲಾಪು, ಬಾರ್ಯ ಗ್ರಾ.ಪಂ.ಸದಸ್ಯೆ ಉಷಾ ಶರತ್, ಪ್ರಮುಖರಾದ ರಮೇಶ್ ಬಂಗೇರ, ಚೆನ್ನಪ್ಪ ಸಾಲಿಯಾನ್ , ವಿಶ್ವನಾಥ್ ಬಿತ್ತ, ಯೂಸುಫ್, ಮಹ್ಮಮದ್ ಫಾರುಕ್ ಪೆರ್ನೆ, ಬ್ಯಾಂಕ್ ಉಪಾಧ್ಯಕ್ಷ ತಾಜುದ್ದೀನ್,ನಿವೃತ್ತ ವೃತ್ತ ನಿರೀಕ್ಷಕ ಸುದರ್ಶನ್,ನಿವೃತ್ತ ಅಧ್ಯಾಪಕ ಕೂಸಪ್ಪ , ಪ್ರಗತಿ ಪರ ಕೃಷಿಕ ಕಿಶೋರ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.

ವೆಲ್‌ನೆಸ್ ಸೆಂಟರ್‌ನಲ್ಲಿ ದಂತ ಚಿಕಿತ್ಸೆ, ಆಯುರ್ವೇದ, ಮಕ್ಕಳ ತಜ್ಞರು, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಎಲುಬು ಮತ್ತು ಕೀಲು ರೋಗ ತಜ್ಞರು, ಎಲೋಪತಿ, ಪ್ರಕೃತಿ ಚಿಕಿತ್ಸೆಗಳು, ಲ್ಯಾಬ್, ಇಸಿಜಿ, ಡೇ ಕೇರ್‌ಗಳು ಲಭ್ಯವಿರುತ್ತದೆ. ಜೊತೆಗೆ ಅಂಬ್ಯುಲೆನ್ಸ್ ಸರ್ವೀಸ್ ಕೂಡ ಇರುತ್ತದೆ ಎಂದು ಹಿರಿಯ ದಂತ ವೈದ್ಯ ಡಾ. ರಾಜಾರಾಮ್ ಕೆ.ಬಿ. ತಿಳಿಸಿದರು.

Related posts

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!