26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ; ಕೊಟ್ಟ ಹಣ ಮರಳಿ ಕೇಳಲು ಹೋದವರ ಮೇಲೆ ವ್ಯಕ್ತಿಯೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ವೇಣೂರು ಠಾಣಾ ವ್ಯಾಪ್ತಿಯ ತೆಂಕಕಾರಂದೂರು ಕಟ್ಟೆ ಎಂಬಲ್ಲಿ ಡಿ.11 ರಂದು ನಡೆದಿದೆ.

ಹಲ್ಲೆಗೆ ಒಳಗಾಗಿರುವ ದಾವೂದ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಟ್ಟೆ ನಿವಾಸಿ ಇಕ್ಬಾಲ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಪಡಂಗಡಿ ನಿವಾಸಿ ದಾವೂದ್ ಎಂಬವರು ಇಕ್ಬಾಲ್ ಅವರಿಗೆ ರೂ 50 ಸಾವಿರ ನೀಡಿದ್ದು ಸದ್ರಿ ಹಣವನ್ನು ಹಿಂತಿರುಗಿಸುವಂತೆ ಕೇಳಲು ಡಿ.11ರಂದು ಸ್ನೇಹಿತರೊಂದಿಗೆ ಇಕ್ಬಾಲ್ ನ ಕಟ್ಟೆಯ ಮನೆಗೆ ಸಂಜೆ ಹೋಗಿದ್ದು ಮನೆಯ ಮುಂದಿನಿಂದ ಮೊಬೈಲ್ ಕರೆ ಮಾಡಿ ಹೊರಗೆ ಕರೆದಿದ್ದಾನೆ. ಈ ವೇಳೆ ಮನೆಯಿಂದ ತಲ್ವಾರ್ ನೊಂದಿಗೆ ಹೊರ ಬಂದ ಆರೋಪಿ ದಾವೂದ್ ನ ತಲೆಗೆ ಕಡಿದಿರುವುದಾಗಿ ಆರೋಪಿಸಿ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಕಲಂ 109 BNS-2023 ರಂತೆ ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya
error: Content is protected !!