ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಡಿ. 16 ರಿಂದ 30 ರವರೆಗೆ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಟಲ್ಜಿ ಸಭಾಭವನದಲ್ಲಿ ನಡೆಯಲಿದೆ.
ಉದ್ಘಾಟಣೆಯನ್ನು ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ನೆರವೇರಿಸಲಿದ್ದಾರೆ. ಪುತ್ತೂರು ನೆಮ್ಮದಿ ವೆಲ್ನೆಸ್ ಸೆಂಟರ್ ಮ್ಹಾಲಕ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಮಾಹಿತಿ ನೀಡುವವರು.
ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರೀತಮ್ , ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷ ಅಜಿತ್ ಜೈನ್, ಧರ್ಮಸ್ಥಳ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ , ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಭಾಗವಹಿಸಲಿದ್ದಾರೆ.
ಥೆರಪಿಯು ಪ್ರತಿ ದಿನ ಪೂರ್ವಾಹ್ನ 10.00 ರಿಂದ ಅಪರಾಹ್ನ 4-30 ರವರೆಗೆ ನಡೆಯಲಿದೆ.













