24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಜೋಡುಕಟ್ಟೆ ರಸ್ತೆ ಸುಮಾರು 1.00ಕಿ.ಮೀ ಉದ್ದದ ರಸ್ತೆ ಡಾಮರೀಕರಣಗೊಂಡು ಹಲವಾರು ವರ್ಷಗಳೇ ಕಳೆದರು ರಸ್ತೆಗಿಲ್ಲ ದುರಸ್ತಿ ಭಾಗ್ಯ ಸರ್ಕಾರ ಈ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ತೆಕ್ಕಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಹಾಲಿ ಸದಸ್ಯ ಅಬ್ದುಲ್ ರಝಾಕ್ ಆಗ್ರಹಿಸಿದ್ದಾರೆ.

ಈ ರಸ್ತೆಯಲ್ಲಿ ನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ನಾಗರೀಕರ ಪ್ರಮುಖ ಕೊಂಡಿಯಾಗಿದೆ ಈ ರಸ್ತೆ. ತೆಕ್ಕಾರಿನ ಜನತೆ ನ್ಯಾಯ ಬೆಲೆ ಅಂಗಡಿಗೆ ಸಾಗಲು ಇದೆ ರಸ್ತೆಯನ್ನು ಅನುಸರಿಸಬೇಕು. ದಿನಂಪ್ರತಿ ಖಾಸಗಿ ಬಸ್ ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತದೆ. ಮಳೆಗಾಲದಲ್ಲೂ ಅಂತು ಸಂಪೂರ್ಣವಾಗಿ ರಸ್ತೆ ಹದಗೆಟ್ಟು ಸಂಚಾರ ದುಸ್ತರವಾಗುತ್ತಿದೆ.

ಈ ಬಗ್ಗೆ ಹಲವಾರು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡಲಾಗಿದೆ. ಇದೀಗ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ರಸ್ತೆ ನಿರ್ಮಾಣಕ್ಕೆ ರೂ. 69.50 ಲಕ್ಷ ಅನುದಾನದ ಅಗತ್ಯವಿದೆ ಎಂದು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದು ಸರ್ಕಾರ ಶೀಘ್ರ ಅತೀ ಶೀಘ್ರವಾಗಿ ರಸ್ತೆ ನಿರ್ಮಾಣಗೊಳಿಸಿ ದುಸ್ತರ ಸಂಚಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!